ಅದು ಆಖ್ಯಾನ, ಇದು ವ್ಯಾಖ್ಯಾನ
ಬಂದು ನಿಂತಿದ್ದಾನೆ ಕುಚೇಲ. ಎದುರಿಗೆ ಶ್ರೀಕೃಷ್ಣಪರಮಾತ್ಮನ ದೊಡ್ಡ ಅರಮನೆ. ಕಾವಲಿಗೆ ನೂರಾರು ಕಾಲಾಳುಗಳು. ಕಾಲಾಳುಗಳಿಗೂ ಹೊಳೆಹೊಳೆವ ಬಟ್ಟೆ. ಆದರೆ, ಕುಚೇಲ ತೊಟ್ಟ ತೊಡುಗೆ ಹರಿದಿದೆ, ಮಣ್ಣು ಮೆತ್ತಿದೆ. ಹಾಗಾಗಿ ಅವನ ಹರಕು ಬಟ್ಟೆ ಕೊಳೆಯಾದ ಕಾಲನ್ನೂ, ಕಾಲು ಹರಿದ ಬಟ್ಟೆಯನ್ನೂ ಮರೆಮಾಚಲು ನಾಮುಂದು ತಾಮುಂದು ಎಂದಿದೆ. ಆದರೆ, ಅವನ ಕೊಳೆಕಾಲೂ, ಹರಿದ ಶಾಲೂ ಸಂಕೋಚದಿಂದ ಮುಚ್ಚಿಟ್ಟುಕೊಳ್ಳಲು ಪ್ರಯತ್ನಿಸುತ್ತಿರುವುದು ಹರಿದ ವಸ್ತ್ರಗಳಲ್ಲಿ ಕಟ್ಟಿ ತಂದ ಅವಲಕ್ಕಿಯನ್ನು.
ರಾಜಭಟ ಅವನನ್ನು ನೋಡಿದ, ನೋಡಿ ಕೇಳಿದ: ಯಾರೋ ನೀನು, [...]