ಸುರೇಶ್ ಕೆ `ಉದಯವಾಣಿ’ಯ ಸಹೋದ್ಯೋಗಿ. ಶುಕ್ರವಾರದ `ಸುಚಿತ್ರ’ ಸಿನಿಪುರವಣಿಯನ್ನು ನಿರ್ವಹಿಸುವವರು. ಅಂದವಾದ ಮುಖಪುಟ ರೂಪಿಸುವಲ್ಲಿ, ವಿಶೇಷವಾಗಿ ಪುರವಣಿಗಳಿಗೆ ಅಂದ, ಆಕಾರವನ್ನು ನೀಡುವಲ್ಲಿ ನುರಿತಿರುವ ಲೇಔಟ್ ತಜ್ಞ. ಸಿನಿಮಾಗಳನ್ನು ಖಚಿತವಾಗಿ ವಿಮರ್ಶಿಸಬಲ್ಲ, ಮೊನಚಾಗಿ ಬರೆಯಬಲ್ಲ, ಯಾವುದೇ ಕಲೆಯನ್ನು ಸುಲಭವಾಗಿ ಗ್ರಹಿಸಿ, ಬರವಣಿಗೆಗೆ ಇಳಿಸಬಲ್ಲವರು ಸುರೇಶ್.
ಆದರೆ ಕತೆ, ಕವಿತೆಗಳ ಬರವಣಿಗೆಗೆ ಈವರೆಗೂ ತೊಡಗದೇ ಇದ್ದ ಸುರೇಶ್ ಅಚಾನಕ್ ಒಂದು ಕತೆ ಬರೆದು ಅಚ್ಚರಿ ಮೂಡಿಸಿದ್ದಾರೆ. ಕತೆಯ ಹೆಸರು: ಕಾಗದ ಬಂದಿದೆ. ಪತ್ರಲೇಖನ ಹೋಗಿ ಎಸ್ಸೆಮ್ಮೆಸ್ ಲೇಖನಕ್ಕೆ ಬಂದು ನಿಂತಿರುವ ನಮ್ಮ [...]